ಏಕ ಕಾಲಕ್ಕೆ ಹದಿನಾಲ್ಕು ಕೃತಿಗಳ ಲೋಕಾರ್ಪಣೆ ಮತ್ತು ಕವಿಗೋಷ್ಠಿ


ಥಾಣೆ : ಇದೇ ಬರುವ ದಿಸೆಂಬರ್ ೩೦ರಂದು ಥಾಣೆ ಪೂರ್ವ, ಎಲ್.ಬಿ.ಎಸ್ ಮಾರ್ಗ, ರಹೇಜಾ ಗಾರ್ಡನ್ ಎದುರುಗಿರುವ ಉಡ್ ಲ್ಯಾಂಡ್ ರಿಟ್ರೀಟ್ ಹೋಟೆಲ್ ನಲ್ಲಿ ೪ ಗಂಟೆಗೆ ಸರಿಯಾಗಿ ಡಾ. ಕರುಣಾಕರ ಶೆಟ್ಟಿ ಪಣಿಯೂರು, ಪಾಂಗಾಳ ವಿಶ್ವನಾಥ ಶೆಟ್ಟಿ ಮತ್ತು ಶೃತಿ ಅಭಿಷೇಕ್ ಶೆಟ್ಟಿಯವರು ಬರೆದಿರುವ ಒಟ್ಟು ಹದಿನಾಲ್ಕು ಕೃತಿಗಳು ಲೋಕಾರ್ಪಣೆಗೊಳ್ಳಲಿದೆ . ಬಾಳೊಂದು ಉಯ್ಯಾಲೆ ಮತ್ತು ದೂರದ ಬೆಟ್ಟ (ಕಥಾ ಸಂಕಲನ), ಮಣ್ಣಿನ ಕರೆ (ಕಾದಂಬರಿ), ಬೋಗನ ವಿಲ್ಲಾ (ಕವಿತಾ ಸಂಕಲನ), ವಿಚಾರ ವಿಮರ್ಶೆ-೪, ಅನಾವರಣ(ಕೃತಿ ಸಮೀಕ್ಷೆ), ಕಾರಂತ ಪ್ರೇಮಚಂದ ಅನುಸಂಧಾನ, ಪ್ರದೀಪ ಅನಾವರಣ, ಓದಿದ್ದು ಹೊಳೆದದ್ದು, ಪಾಂಗಾಳದ ಪಿಂಗಾರ (ಅಭಿನಂದನಾ ಗ್ರಂಥ) ಹೀಗೆ ಡಾ. ಕರುಣಾಕರ ಶೆಟ್ಟಿ ಪಣಿಯೂರು ರವರ ಲೇಖನಿಯಿಂದ ರೂಪುಗೊಂಡಿರುವ ಹತ್ತು ಕೃತಿ ರತ್ನಗಳು ಬಿಡುಗಡೆಗೊಳ್ಳಲಿದೆ.

ಪುಣೆಯ ಕವಿ ಪಾಂಗಾಳ ವಿಶ್ವನಾಥ ಶೆಟ್ಟಿಯವರ ಸಾವಿರ ನೆನಪಿನ ಗೂಡು, (ಬಾಲ್ಯದ ನೆನಪುಗಳು), ಮಾತು ಮುತ್ತಾದಾಗ ( ಕವನ ಸಂಕಲನ), ಧರೆಗಿಳಿದ ಸೂರ್ಯ(ಕಥಾ ಸಂಕಲನ) ಕೃತಿ ಲೋಕಾರ್ಪಣೆಯಾಗಲಿದೆ. ತಂದೆಯವರ ಸಾಹಿತ್ಯದಿಂದ ಪ್ರೇರಿತರಾಗಿ ಇಂಗ್ಲಿಷ್ ನಲ್ಲಿ ” ಅಬ್ ಸ್ಟ್ರಾಕ್ಟ್ – ಪೀಸ್ ಆಫ಼್ ಮೈ ಮೈಂಡ್” ಎಂಬ ಕವನ ಸಂಕಲನವನ್ನು ರಚಿಸಿ ಯುವ ಜನರ ಮೆಚ್ಚುಗೆ ಗಳಿಸಿರುವ ಕರುಣಾಕರ ಶೆಟ್ಟಿಯವರ ಮಗಳು ಶೃತಿ ಅಭಿಷೇಕ್ ಶೆಟ್ಟಿಯವರ “ಲೈಫ಼್ ಟೂಲ್ಸ್”(ಇಂಗ್ಲೀಷ್ ಕಾದಂಬರಿ) ಕೃತಿಯೂ ಬಿಡುಗಡೆಗೊಳ್ಳಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಂದ್ರಹಾಸ ಶೆಟ್ಟಿ ವಹಿಸಿಕೊಳ್ಳಲಿದ್ದಾರೆ. ಹಾಗೆಯೆ ಆನಂದ್ ಶೆಟ್ಟಿ ಎಕ್ಕಾರ್ , ಡಿ.ಜಿ.ಬೋಳಾರ್ ಮತ್ತು ಅಡ್ವೋಕೇಟ್ ಪದ್ಮನಾಭ ಶೆಟ್ಟಿ ಯವರು ಗೌರವ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಡಾ. ಜಿ.ಪಿ ಕುಸುಮ, ಪೊಳಲಿ ಮಹೇಶ್ ಪ್ರಸಾದ್ ಹೆಗ್ಡೆ, ಅಶೋಕ್ ವಳದೂರು , ಡಾ.ದ್ರಾಕ್ಷಾಯಿಣಿ ಯಡಹಳ್ಳಿ, ಲತಾ ಸಂತೋಷ್ ಶೆಟ್ಟಿ ಮತ್ತು ಸವಿತಾ ಅರುಣ್ ಶೆಟ್ಟಿಯವರು ಕೃತಿ ಪರಿಚಯ ಮಾಡಲಿದ್ದಾರೆ.

ಈ ಕಾರ್ಯಕ್ರಮದ ನಂತರ ಮುಂಬಯಿ ಚುಕ್ಕಿ ಸಂಕುಲ ಸದಸ್ಯರಿಂದ ಕವಿಗೋಷ್ಠಿಯನ್ನು ಆಯೋಜಿಸಲಾಗಿದೆ. ಈ ಅಕ್ಷರ ಜಾತ್ರೆಗೆ ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕೆಂದು ಕಾರ್ಯಕ್ರಮದ ಆಯೋಜಕರಾದ ಮುಂಬಯಿ ಚುಕ್ಕಿ ಸಂಕುಲ ಇವರು ವಿನಂತಿಸಿ ಕೊಂಡಿದ್ದಾರೆ.

ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಿ

ನಿಮ್ಮ ಪ್ರತಿಕ್ರಿಯೆಗಳಿಗೆ ಸ್ವಾಗತ

Leave a Comment

Your email address will not be published. Required fields are marked *

ಫೇಸ್‌ಬುಕ್‌ ಲಾಗಿನ್ ಬಳಸಿ ಕಮೆಂಟ್‌ ಮಾಡಿ

Sign up for our Newsletter

Editor and Advisors/ Patrons

Prakash Rao Payyar

Chief Editor

Shri Manohar Thonse

-Abu Dhabi

Shri Prabhakar Kamath

- Dubai

Mallikarjuna Gowda

- Dubai

Prakash R.

- Dubai